Oppanna
Oppanna.com

ಗೋಪಾಲಣ್ಣ

ಶೇಡಿಗುಮ್ಮೆ ಗೋಪಾಲಣ್ಣನ ಬಗ್ಗೆ ಬೈಲಿಂಗೆ ಮೊದಲೇ ಅರಡಿಗು. ಶರ್ಮಪ್ಪಚ್ಚಿ ಅವರಬಗ್ಗೆ ವಿಶೇಷವಾದ ಶುದ್ದಿಯನ್ನೇ ಬೈಲಿಂಗೆ ಹೇಳಿತಿಳುಸಿದ್ದವು. ( ಸಾಧನೆಗೆ ಅಡ್ಡಿ ಆಗದ್ದ ಅಂಗವೈಕಲ್ಯ: https://oppanna.com/nammooru/shedigumme-gopalakrishna-bhat ) ಹ್ಮ್, ಅಪ್ಪು. ಶರ್ಮಪ್ಪಚ್ಚಿ ಹೇಳಿದ ಹಾಂಗೆಯೇ, ಅವು ದೈಹಿಕವಾಗಿ ಎದ್ದು ನಿಂಬಲೆ ಸಾಧ್ಯ ಆಗದ್ದೆ ಇಕ್ಕು, ಆದರೆ ಅವು ಮಾನಸಿಕವಾಗಿ ಎದ್ದು ನಿಂದ ರೀತಿ ಇದ್ದನ್ನೆ- ಅದರ ಗ್ರೇಶಿರೆ ಒಪ್ಪಣ್ಣಂಗೆ ತುಂಬಾ ಕೊಶಿ ಅಪ್ಪದು. ಸ್ವಂತವಾಗಿ ಬರದು ಪಾಸಪ್ಪ ಪರೀಕ್ಷೆಗೊ, ಅದರಿಂದ ಮತ್ತೆ ಸಿಕ್ಕಿದ ಸ್ವಂತ ಉದ್ಯೋಗ, ಅಲ್ಲಿಂದ ಮುಂದಕ್ಕೆ ನೆಡದು ಬಂದ ಸ್ವಂತ ಸಂಪಾದನೆಯ ಜೀವನ – ಇದರ ಎಲ್ಲವನ್ನುದೇ ಗ್ರೇಶಿರೆ, ಜೀವನವ ಎದರುಸಲೆ ಒದಗಿ ಬಂದ ದೈವಪರೀಕ್ಷೆ ಹೇಳಿ ಅನುಸುದು ಒಪ್ಪಣ್ಣಂಗೆ. ಈಗ ಅವು ಉದ್ಯೋಗಸ್ಥರಾಗಿದ್ದರೂ, ಕೆಲವು ಪುಸ್ತಕಂಗಳ ಬರದು ಸಾಹಿತ್ಯಕ್ಷೇತ್ರಕ್ಕೂ ಹೊಂದುತ್ತ ಸಾಧನೆಯ ಮಾಡಿ ತೋರುಸಿದ್ದವು. ಅವರ ಜೀವನಗಾಥೆಯೇ ಒಳುದೋರಿಂಗೆ ಪ್ರೇರೇಪಣೆ. ಇದರನ್ನೇ ನಮ್ಮ ಶರ್ಮಪ್ಪಚ್ಚಿ ಐದಾರು ತಿಂಗಳು ಹಿಂದೆ ಹೇಳಿದ್ದದು! ಇರಳಿ, ನಮ್ಮ ಹತ್ತರಾಣೋರು ಹಾಂಗೆ ಮಿಂಚಿರೆ ನವಗೂ ಕೊಶಿಯೇ. ಅವು ಇನ್ನೂ ಹತ್ತರೆ ಬಂದರೆ ಮತ್ತೂ ಕೊಶಿ, ಅಲ್ಲದೋ? ಬೈಲಿಂಗೆ ಶುದ್ದಿ ಹೇಳುತ್ತಿರೋ – ಕೇಳಿದೆ ಒಂದರಿ ಅವರತ್ರೆ. ಸಂತೋಷಲ್ಲಿ ಒಪ್ಪಿಗೊಂಡವು. ಅವು ಒಪ್ಪಿ, ತಕ್ಷಣ ಕೊಶೀಲಿ ಕಳುಸಿದ ಆ ಶುದ್ದಿಯ ಕಂಡು ಒಪ್ಪಣ್ಣಂಗೆ ಕೊಶಿಯೂ ಆಶ್ಚರ್ಯವೂ ಆಗಿಬಿಟ್ಟತ್ತು! ಅವರ ಶುದ್ದಿಗಳ ನಾವೆಲ್ಲೊರೂ ಕೇಳುವೊ°, ಪ್ರೀತಿಲಿ ಒಪ್ಪ ಕೊಡುವೊ°. ಸಾಹಿತ್ಯದ ಅವರ ಅಭಿರುಚಿಯ ಇನ್ನುದೇ ಬೆಳೆಸುವೊ°, ಆಗದೋ?

ಭೂತ

ಗೋಪಾಲಣ್ಣ 02/01/2011

ಶಂಭಟ್ರಿಂಗೆ ಅಂದು ಉದಿಯಪ್ಪಗಳೇ ಗಡಿಬಿಡಿ. ನಾಕು ಗಂಟೆಗೆ ಎದ್ದವು.ನಿತ್ಯದ ಕೆಲಸ

ಇನ್ನೂ ಓದುತ್ತೀರ

ಲೆಕ್ಕದ ಚೋದ್ಯ

ಗೋಪಾಲಣ್ಣ 22/12/2010

ಒಂದು ದಿನ ಮನೆಲಿ ಎಂಗೊ ಎಲ್ಲ ಮೋಜಿನ ಲೆಕ್ಕದ ವಿಷಯ ಮಾತಾಡಿಕೊಂಡಿಪ್ಪ ಸಮಯ – ಎನ್ನ

ಇನ್ನೂ ಓದುತ್ತೀರ

ಒಪ್ಪಣ್ಣ
ದೇವಸ್ಯ ಮಾಣಿ
ಕಾವಿನಮೂಲೆ ಮಾಣಿ
ಅಕ್ಷರ°
ಅನಿತಾ ನರೇಶ್, ಮಂಚಿ
ಅನು ಉಡುಪುಮೂಲೆ
ಎಬಿ ಭಾವ
ಬಂಡಾಡಿ ಅಜ್ಜಿ
ಬಟ್ಟಮಾವ°
ಪುಣಚ ಡಾಕ್ಟ್ರು
ಮಾಲಕ್ಕ°
ಬೋಸ ಬಾವ
ಒಪ್ಪಣ್ಣ
Menu
×